ಶ್ರೀನಗರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ವೇಳೆ ಸಿಕ್ಕಿಬಿದ್ದಿದ್ದ ಇಬ್ಬರು ಉಗ್ರರು ಶನಿವಾರ ಸೇನಾಧಿಕಾರಿಗಳ ಮುಂದೆ ಶಸ್ತ್ರಾಸ್ತ್ರ ಒಪ್ಪಿಸಿ ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಆಧರಿಸಿ ಶುಕ್ರವಾರ ರಾತ್ರಿ ಭದ್ರತಾ ಪಡೆಗಳು ಜಿಲ್ಲೆಯ ಕಾಕಪೋರಾ ಪ್ರದೇಶದ ಲೆಲ್ಹಾರ್ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
ಅಡಗಿದ್ದ ಉಗ್ರರು ಏಕಾಏಕಿ ಗುಂಡು ಹಾರಿಸಲು ಪ್ರಾರಂಭಿಸಿದಾಗ ಶೋಧ ಕಾರ್ಯಾಚರಣೆಗೆ ಎನ್ಕೌಂಟರ್ಗೆ ತಿರುಗಿತ್ತು. ರಾತ್ರಿಯಿಡೀ ಗುಂಡಿನ ಚಕಮಕಿಯ ಬಳಿಕ, ಇಬ್ಬರು ಉಗ್ರರು ತಮ್ಮ ಎರಡು ಎಕೆ ರೈಫಲ್ಗಳೊಂದಿಗೆ ಭದ್ರತಾ ಪಡೆಗಳ ಮುಂದೆ ಶರಣಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶರಣಾದ ಉಗ್ರರನ್ನು ಅಕೀಲ್ ಅಹ್ಮದ್ ಲೋನ್ ಮತ್ತು ರೂಫ್ ಉಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಅಕೀಲ್ ಅಹ್ಮದ್ ಲೋನ್ ಬಲಗಾಲಿನಲ್ಲಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಇಲ್ಲಿನ ಪೊಲೀಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.