ADVERTISEMENT

ಬಾರಾಮುಲ್ಲಾ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಇಬ್ಬರು ಯೋಧರು ಹುತಾತ್ಮ

ಏಜೆನ್ಸೀಸ್
Published 18 ಆಗಸ್ಟ್ 2020, 14:48 IST
Last Updated 18 ಆಗಸ್ಟ್ 2020, 14:48 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಸೇನಾಮೂಲಗಳು ಹೇಳಿವೆ.

ಬಾರಾಮುಲ್ಲಾ ಜಿಲ್ಲೆಯ ‘ನಾಕಾ’ ಬಳಿ ಸೋಮವಾರ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್‌ ಅಧಿಕಾರಿ ಮತ್ತು ಸಿಆರ್‌ಪಿಎಫ್‌ನ ಇಬ್ಬರು ಯೋಧರು ಹುತಾತ್ಮರಾಗಿದ್ದರು.

ಅದೇ ವೇಳೆ ಉತ್ತರ ಕಾಶ್ಮೀರ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಮೂಲಗಳು ಹೇಳಿವೆ.

ADVERTISEMENT

ಉತ್ತರ ಕಾಶ್ಮೀರದಲ್ಲಿರುವ ಲಷ್ಕರೆ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸಾಜದ್ ಹೈದರ್ ಸೇರಿದಂತೆ ಇಬ್ಬರು ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿತ್ತು.ಪ್ರಸ್ತುತ ಪ್ರದೇಶದಲ್ಲಿ ಸೇನಾಪಡೆ ಉಗ್ರರಿಗಾಗಿ ಹುಡುಕಾಟ ಮುಂದುವರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.