ADVERTISEMENT

ಬೆಂಗಳೂರು: ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವು, ಕಾರು ಚಾಲಕ ಪರಾರಿ

ಐಎಎನ್ಎಸ್
Published 7 ಜನವರಿ 2023, 6:05 IST
Last Updated 7 ಜನವರಿ 2023, 6:05 IST
   

ಬೆಂಗಳೂರು: ನಗರದ ಕೆ.ಆರ್. ಪುರಂನಲ್ಲಿ ಶುಕ್ರವಾರ ತಡರಾತ್ರಿ ಆಟೊಗೆ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಮೃತ ಮಹಿಳೆಯರನ್ನು ಫಾಝಿಲಾ ಮತ್ತು ತಸೀನಾ ಎಂದು ಗುರುತಿಸಲಾಗಿದೆ.

ADVERTISEMENT

ಘಟನೆಯಲ್ಲಿ ತಸೀನಾ ಅವರ ಪತಿ ಖಲೀದ್ ಮತ್ತು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಕೆ.ಆರ್. ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.