ಕೊಚ್ಚಿ: ಎರ್ನಾಕುಳಂ ಜಿಲ್ಲೆಯ ಕಾಲಡಿ ಸಮೀಪದಮಲಯಾಟ್ಟೂರಿನಗಣಿಗಾರಿಕೆಪ್ರದೇಶದ ಕಟ್ಟಡವೊಂದರಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ವಲಸೆಕಾರ್ಮಿಕರುಮೃತಪಟ್ಟಿದ್ದಾರೆ.
ಸುಮಾರು ಬೆಳಿಗ್ಗೆ 3 ಗಂಟೆಗೆ ಅವಘಡ ಸಂಭವಿಸಿದೆ.ಅವಶೇಷಗಳಡಿಯಿಂದ ಶವಗಳನ್ನು ಹೊರ ತೆಗೆಯಲಾಗಿದೆ. ಈ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮೃತದೇಹವನ್ನು ಅಂಗಮಾಲಿ ಆಸ್ಪತ್ರೆಯಲ್ಲಿರಿಸಲಾಗಿದೆ. ಸ್ಫೋಟಕ್ಕೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.