ADVERTISEMENT

ಪ್ರವಾಹದ ನಡುವೆ ಯಮುನಾ ನದಿಗೆ ಸ್ನಾನಕ್ಕೆ ತೆರಳಿದ್ದ ಯುವಕರು ನಾಪತ್ತೆ

ಪಿಟಿಐ
Published 16 ಜುಲೈ 2023, 9:56 IST
Last Updated 16 ಜುಲೈ 2023, 9:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನೋಯ್ಡಾ : ಪ್ರವಾಹದ ನಡುವೆಯೂ ಭಾನುವಾರ ಸ್ನಾನಕ್ಕೆಂದು ಯಮುನಾ ನದಿ ತೀರಕ್ಕೆ ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದಾರೆ.

ಕಾಣೆಯಾದವರನ್ನು ಧನಕೌರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಮಕಾನಪುರ ಖಾದರ್ ಗ್ರಾಮದ ಧೀರಜ್‌ (21) ಸಂಜಿತ್‌(17) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಪ್ರವಾಹ ಪೀಡಿತ ಯಮುನಾ ತೀರಕ್ಕೆ ಯುವಕರು ಸ್ನಾನಕ್ಕೆಂದು ತೆರಳಿದ್ದರು. ದಂಡೆಯ ಮೇಲೆ ಅವರ ಫೋನ್‌ ಮತ್ತು ಬಟ್ಟೆಗಳು ದೊರೆತಿವೆ ಆದರೆ ಯುವಕರು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

ಮಕಾನಪುರ ಖಾದರ್ ಪ್ರದೇಶ ಯುಮುನೆಯ ಪ್ರವಾಹಕ್ಕೆ ಸಿಲುಕಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾಗಿದೆ. 

ದೆಹಲಿಯಲ್ಲಿ ಉಂಟಾದ ಪ್ರವಾಹದಲ್ಲಿ 7,200ಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದು. 6 ಸಾವಿರ ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.