ADVERTISEMENT

ಉದಯಪುರದ ಟೈಲರ್‌ ಹತ್ಯೆ ಪ್ರಕರಣ ನನ್ನನ್ನು ಬೆಚ್ಚಿಬೀಳಿಸಿದೆ: ಹರಭಜನ್‌ ಸಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜೂನ್ 2022, 10:27 IST
Last Updated 29 ಜೂನ್ 2022, 10:27 IST
ಹರಭಜನ್‌ ಸಿಂಗ್‌
ಹರಭಜನ್‌ ಸಿಂಗ್‌   

ನವದೆಹಲಿ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್‌ ಹತ್ಯೆಯನ್ನು ರಾಜ್ಯಸಭಾ ಸದಸ್ಯ, ಮಾಜಿ ಕ್ರಿಕೆಟಿಗ ಹರಭಜನ್‌ ಸಿಂಗ್‌ ಖಂಡಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಉದಯಪುರದಲ್ಲಿ ನಡೆದ ಭಯಾನಕ ಘಟನೆ ನನ್ನನ್ನು ಬೆಚ್ಚಿಬೀಳಿಸಿದೆ’ ಎಂದು ತಿಳಿಸಿದ್ದಾರೆ.

‘ಯಾವುದೇ ಸುಸಂಸ್ಕೃತ ಸಮಾಜದಲ್ಲಿ ನಡೆಯಬಾರದ ಘೋರ ಅಪರಾಧವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅಪರಾಧ ಎಸಗಿದವರ ವಿರುದ್ಧ ಕಠಿಣ ಮತ್ತು ಶೀಘ್ರ ಕ್ರಮ ಜರುಗಿಸಬೇಕು’ ಎಂದು ಹರಭಜನ್‌ ಸಿಂಗ್‌ ಒತ್ತಾಯಿಸಿದ್ದಾರೆ. \

ADVERTISEMENT

ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯ ಶಿರಚ್ಛೇದ ಮಾಡಿ ಹತ್ಯೆ ಮಾಡಲಾಗಿತ್ತು.

ಕೃತ್ಯದ ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ ದುಷ್ಕರ್ಮಿಗಳು ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೊದಲ್ಲಿ ಕಂಡುಬಂದಿರುವ ವ್ಯಕ್ತಿಗಳಿಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.