ಮುಂಬೈ:ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದಿರುವ ಶಿವಸೇನಾ, ಎನ್ಸಿಪಿ, ಕಾಂಗ್ರೆಸ್ ಪಕ್ಷದ ಮೈತ್ರಿ ಸರ್ಕಾರ ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದಿದೆ
ವಿಶ್ವಾಸಮತ ಯಾಚನೆಗೂ ಮುನ್ನ ಹಂಗಾಮಿ ಸ್ಪೀಕರ್ ಆಗಿ ದೀಲಿಪ್ ಪಾಟೀಲ್ ಅವರನ್ನು ನೇಮಕ ಮಾಡಲಾಯಿತು.
ಇದನ್ನೂ ಓದಿ:ಸೇನಾ- ಕಾಂಗ್ರೆಸ್ ‘ಐತಿಹಾಸಿಕ’ ಮೈತ್ರಿ
ಮುಖ್ಯಮಂತ್ರಿ ಉದ್ದವ್ ಠಾಕ್ರೆ ವಿಶ್ವಾಸಮತ ಯಾಚನೆ ಮಾಡುವನಿರ್ಣಯವನ್ನು ಮಂಡಿಸಿದರು. ತಲೆ ಎಣಿಕೆ ಕಾರ್ಯ ನಡೆಯುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದಿಂದ ಹೊರ ನಡೆದರು.
ಶಿವಸೇನಾ, ಎನ್ಸಿಪಿ, ಕಾಂಗ್ರೆಸ್ ಮೈತ್ರಿ ಸರ್ಕಾರದ ಪರವಾಗಿ 169 ಮತಗಳು ಬಿದ್ದವು.
288 ಸ್ಥಾನಗಳ ಪೈಕಿ ಬಿಜೆಪಿ 105, ಶಿವಸೇನಾ56, ಕಾಂಗ್ರೆಸ್44, ಎನ್ಸಿಪಿ 54, ಇತರರು 29 ಸ್ಥಾನಗಳನ್ನು ಪಡೆದಿದ್ದಾರೆ. ಬಹುಮತ ಸಾಬೀತುಪಡಿಸಲು 145 ಮತಗಳು ಬೇಕಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.