ADVERTISEMENT

ಸಂಸ್ಕೃತ 'ಸತ್ತ ಭಾಷೆ': ಉದಯನಿಧಿ ಹೇಳಿಕೆಗೆ ಬಿಜೆಪಿ ತಿರುಗೇಟು

ಪಿಟಿಐ
Published 21 ನವೆಂಬರ್ 2025, 9:32 IST
Last Updated 21 ನವೆಂಬರ್ 2025, 9:32 IST
   

ಚೆನ್ನೈ: ಸಂಸ್ಕೃತ 'ಸತ್ತ ಭಾಷೆ' ಎಂಬ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ರಾಜಕೀಯ ನಾಯಕರಾದವರು ಹೇಳಿಕೆ ನೀಡುವಾಗ ಜವಾಬ್ದಾರಿಯುತವಾಗಿರಬೇಕು ಎಂದಿದೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ತಮಿಳು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೇವಲ ₹150 ಕೋಟಿ ಮಂಜೂರು ಮಾಡಿದೆ. ಆದರೆ ಇದಕ್ಕೆ ವ್ಯತಿರಿಕ್ತವಾಗಿ ಸತ್ತ ಭಾಷೆ ಸಂಸ್ಕೃತಕ್ಕೆ ₹2,400 ಕೋಟಿ ನೀಡಿದೆ ಎಂದು ಹೇಳಿದ್ದರು.

ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ನಾಯಕಿ ತಮಿಳ್ ‌ಇಸೈ ಸೌಂದರರಾಜನ್, ಯಾವುದೇ ಭಾಷೆಯನ್ನು ಸತ್ತದ್ದು ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ. ದೇಶದಾದ್ಯಂತ ವಿಶೇಷವಾಗಿ ಪ್ರಾರ್ಥನೆ ಮತ್ತು ಆಚರಣೆಗಳಲ್ಲಿ ಇಂದಿಗೂ ಸಂಸ್ಕೃತವನ್ನು ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಒಂದು ಭಾಷೆಯನ್ನು ಅವಮಾನಿಸುವ ಮೂಲಕ ಇನ್ನೊಂದು ಭಾಷೆಯನ್ನು ಮೆಚ್ಚಿಕೊಳ್ಳುವ ಈ ಮನಸ್ಥಿತಿ ಮೂಲಭೂತವಾಗಿ ತಪ್ಪು. ನಾಯಕರು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಮಾತನಾಡುವಾಗ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.