ADVERTISEMENT

ರಷ್ಯಾ–ಉಕ್ರೇನ್ ಸಂಘರ್ಷದ ವಿಚಾರದಲ್ಲಿ ಭಾರತದ ನಿಲುವು ತಟಸ್ಥ: ಕೇಂದ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2022, 7:20 IST
Last Updated 24 ಫೆಬ್ರುವರಿ 2022, 7:20 IST
ಉಕ್ರೇನ್ ರಾಜಧಾನಿ ಕಿವ್‌ ಮೆಟ್ರೋ ನಿಲ್ದಾಣದಲ್ಲಿ ಜನರು ಆಶ್ರಯ ಪಡೆದಿದ್ದಾರೆ. (ಎಎಫ್‌ಪಿ ಚಿತ್ರ)
ಉಕ್ರೇನ್ ರಾಜಧಾನಿ ಕಿವ್‌ ಮೆಟ್ರೋ ನಿಲ್ದಾಣದಲ್ಲಿ ಜನರು ಆಶ್ರಯ ಪಡೆದಿದ್ದಾರೆ. (ಎಎಫ್‌ಪಿ ಚಿತ್ರ)   

ನವದೆಹಲಿ:ರಷ್ಯಾ–ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವವಿದೇಶಾಂಗ ಸಚಿವಾಲಯದ ರಾಜ್ಯ ಖಾತೆ ಸಚಿವ ಡಾ.ರಾಜಕುಮಾರ್ ರಂಜನ್ ಸಿಂಗ್, 'ಭಾರತದ ನಿಲುವು ತಟಸ್ಥವಾಗಿರಲಿದೆ ಮತ್ತು ಶಾಂತಿಯುತ ಪರಿಹಾರವನ್ನು ನಿರೀಕ್ಷಿಸುತ್ತೇವೆ' ಎಂದು ತಿಳಿಸಿದ್ದಾರೆ.

ರಷ್ಯಾ–ಉಕ್ರೇನ್ ಸಂಘರ್ಷದ ಪರಿಸ್ಥಿತಿಯನ್ನು ನಾವು ಗಂಭೀರವಾಗಿ ಅವಲೋಕನ ಮಾಡುತ್ತಿದ್ದೇವೆ. ಭಾರತೀಯರು, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳ ಸುರಕ್ಷತೆಯತ್ತ ಗಮನ ಹರಿಸಿದ್ದೇವೆ. ವಿದೇಶಾಂಗ ಸಚಿವಾಲಯದ ಕಂಟ್ರೋಲ್‌ ರೂಂ ಕಾರ್ಯಚರಣೆಯನ್ನು ವಿಸ್ತರಿಸಲಾಗಿದ್ದು, 24X7 ಅವಧಿ ಕಾರ್ಯಾಚರಿಸಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.