ADVERTISEMENT

ಯಾರ ಮಗನಾದರೇನು? ಗೂಂಡಾ ವರ್ತನೆ ಸಹಿಸಲ್ಲ: ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 8:58 IST
Last Updated 2 ಜುಲೈ 2019, 8:58 IST
ನರೇಂದ್ರ ಮೋದಿ (ಎಎಫ್‌ಪಿ ಚಿತ್ರ)
ನರೇಂದ್ರ ಮೋದಿ (ಎಎಫ್‌ಪಿ ಚಿತ್ರ)   

ನವದೆಹಲಿ:ಸರ್ಕಾರಿ ನೌಕರನಮೇಲೆ ಕ್ರಿಕೆಟ್ ಬ್ಯಾಟಿನಿಂದಹಲ್ಲೆ ಮಾಡಿರುವಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರುಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್ ವಿಜಯವರ್ಗೀಯವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಕಾಶ್ ವಿಜಯವರ್ಗೀಯ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಪುತ್ರ.

‘ಯಾರ ಮಗನಾದರೇನು,ಗೂಂಡಾ ವರ್ತನೆಯನ್ನು ನಾವು ಸಹಿಸುವುದಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ ಎಂದು ನ್ಯೂಸ್‌ 18 ಸುದ್ದಿ ವಾಹಿನಿ ವರದಿ ಮಾಡಿದೆ.

ADVERTISEMENT

ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟುಮಾಡುವವರು ಪಕ್ಷದಲ್ಲಿ ಮುಂದುವರೆಯಲು ಅನರ್ಹರು ಎಂದು ಮೋದಿ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಜೂನ್ 26ರಂದುಆಕಾಶ್ ವಿಜಯವರ್ಗೀಯ ಅಧಿಕಾರಿಗೆ ಥಳಿಸಿದ್ದರು. ನಂತರ ಅವರನ್ನು ಪೊಲೀಸರು ಬಂದಿಸಿದ್ದರು. ಇದೀಗ ಜಾಮೀನಿನ ಮೇಲೆ ಅವರು ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.