ADVERTISEMENT

ಕೇಂದ್ರ ಬಜೆಟ್–2021: ರಾಜಕೀಯ ನಾಯಕರೊಂದಿಗೆ ಉಪರಾಷ್ಟ್ರಪತಿ ನಾಯ್ಡು ಸಭೆ

ಏಜೆನ್ಸೀಸ್
Published 31 ಜನವರಿ 2021, 7:02 IST
Last Updated 31 ಜನವರಿ 2021, 7:02 IST
ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು
ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು   

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ವಿವಿಧ ರಾಜಕೀಯ ಪಕ್ಷಗಳ ನಾಯಕರೊಂದಿಗೆ ಇಂದು ಸಭೆ ನಡೆಸಲಿದ್ದಾರೆ.

ತಮ್ಮ ನಿವಾಸದಲ್ಲಿರುವ ಸರ್ದಾರ್‌ ವಲ್ಲಭಬಾಯಿ ಪಟೇಲ್‌ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರೂ ಹಾಜರಾಗಲಿದ್ದಾರೆ.

ಜನವರಿ 29 ರಂದು 2020-21ರ ಆರ್ಥಿಕ ಸಮೀಕ್ಷೆ ಸಂಸತ್ತಿನಲ್ಲಿ ಮಂಡನೆಯಾಗಿದೆ. ಪ್ರಸ್ತುತ (2020–21) ಆರ್ಥಿಕ ವರ್ಷದಲ್ಲಿ ದೇಶದ ಆರ್ಥಿಕತ ಬೆಳವಣಿಗೆ ದರ ಶೇ. 7.7ರಷ್ಟು ಕುಂಠಿತಗೊಳ್ಳಲಿದ್ದು, ಮುಂದಿನ ಸಾಲಿನಲ್ಲಿ ಶೇ.11ರಷ್ಟು ಅಭಿವೃದ್ಧಿ ಸಾಧಿಸಲಿದೆ ಎಂದು ಆರ್ಥಿಕ ಸಮೀಕ್ಷೆ ಅಂದಾಜಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.