ನವದೆಹಲಿ: ಕೋವಿಡ್–19 ಲಸಿಕೆ ಲಭ್ಯವಾದ ಬಳಿಕ ಅವುಗಳನ್ನು ವಿತರಿಸಲು ನಡೆಸಲಾದ ಸಿದ್ಧತೆಗಳ ಬಗ್ಗೆ ರಾಜ್ಯಗಳ ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಸಭೆ ನಡೆಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ, ಆದ್ಯತೆ ಮೇಲೆ ಲಸಿಕೆ ನೀಡಬೇಕಾದವರ ದತ್ತಾಂಶವನ್ನು ರಚಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಭೆಯಲ್ಲಿ ಎಲ್ಲ ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಹಾಗೂ ರಾಜ್ಯ, ಕೇಂದ್ರಾಡಳಿತ ಪ್ರದೇಶದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಪೊಲೀಸರು, ಹೋಂಗಾರ್ಡ್, ಅಗ್ನಿ ಶಾಮಕ ದಳ, ಸಿವಿಲ್ ಡಿಫೆನ್ಸ್ನ ಸಿಬ್ಬಂದಿಯ ದತ್ತಾಂಶವನ್ನು ರೂಪಿಸಲು ಭಲ್ಲಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.