ಹೈದರಾಬಾದ್ (ಪಿಟಿಐ): ಹಿರಿಯ ಜೆಡಿ(ಯು) ನಾಯಕ ಮತ್ತು ಕೇಂದ್ರ ಸಚಿವ ಆರ್ಸಿಪಿ ಸಿಂಗ್ ಅವರು ಪಕ್ಷ ಸೇರಲಿದ್ದಾರೆ ಎಂಬ ವರದಿಯನ್ನು ಬಿಜೆಪಿ ನಿರಾಕರಿಸಿದೆ.
ಆರ್ಸಿಪಿ ಸಿಂಗ್, ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೈದರಾಬಾದ್ಗೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದೆ.
‘ಆರ್ಸಿಪಿ ಸಿಂಗ್ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷ ಸೇರಲಿದ್ದಾರೆ ಎಂಬುದು ಸುಳ್ಳುಸುದ್ದಿ. ಅವರು ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಹೈದರಾಬಾದ್ಗೆ ಬಂದಿದ್ದರು. ಅವರನ್ನು ಬಿಜೆಪಿಯ ಕಾರ್ಯಕರ್ತರೊಬ್ಬರು ಸ್ವಾಗತಿಸಿದ್ದರು’ ಎಂದು ಹಿರಿಯ ಬಿಜೆಪಿ ನಾಯಕ ಸುನಿಲ್ ಮೋದಿ ಟ್ವೀಟ್ ಮಾಡಿದ್ದಾರೆ.
ಸಂಸದೀಯ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಅವರು ಹೈದರಾಬಾದ್ಗೆ ಬಂದಿದ್ದರು ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.