ADVERTISEMENT

ಉತ್ತರ ಪ್ರದೇಶ ಬಜೆಟ್ ಅಧಿವೇಶನ: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಗೈರು

ಪಿಟಿಐ
Published 23 ಮೇ 2022, 13:30 IST
Last Updated 23 ಮೇ 2022, 13:30 IST
ಆಜಂ ಖಾನ್
ಆಜಂ ಖಾನ್   

ಲಖನೌ: ಉತ್ತರ ಪ್ರದೇಶದ ಬಜೆಟ್ ಅಧಿವೇಶನದ ಮೊದಲ ದಿನ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ಭಾಗವಹಿಸಲಿಲ್ಲ. ಅಲ್ಲದೆ, ಸೋಮವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಮಾಡುವ ವೇಳೆಯೇ ಸಮಾಜವಾದಿ ಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಸದನ ಆರಂಭವಾಗುತ್ತಿದ್ದಂತೆ ಕಾನೂನು ಸುವ್ಯವಸ್ಥೆ, ರೈತರು ಹಾಗೂ ಅತ್ಯಾಚಾರ ಘಟನೆಗೆ ಸಂಬಂಧಿಸಿದ ಫಲಕಗಳನ್ನು ಹಿಡಿದು, ಸದನದ ಬಾವಿಗೆ ಧುಮುಕಿದ ಎಸ್‌ಪಿ ಸದಸ್ಯರು, ‘ರಾಜ್ಯಪಾಲರೇ ವಾಪಸ್ ಹೋಗಿ’ ಎಂಬ ಘೋಷಣೆಗಳನ್ನು ಕೂಗಿದರು. ಆದಾಗ್ಯೂ, ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, 15 ನಿಮಿಷಗಳ ಕಾಲ ತಮ್ಮ ಭಾಷಣವನ್ನು ಓದಿ ಮುಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT