ADVERTISEMENT

ಅಂಬೇಡ್ಕರ್ ಪ್ರತಿಮೆ ವಿರೂಪ: ಪ್ರತಿಭಟನಕಾರರ ಮೇಲೆ ಪೊಲೀಸ್ ಲಾಠಿ ಪ್ರಹಾರ

ಪಿಟಿಐ
Published 7 ನವೆಂಬರ್ 2022, 11:25 IST
Last Updated 7 ನವೆಂಬರ್ 2022, 11:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಅಯೋಧ್ಯ, ಉತ್ತರ ಪ್ರದೇಶ: ಅಂಬೇಡ್ಕರ್ ನಗರ ಜಿಲ್ಲೆಯ ಬಿ.ಆರ್. ಅಂಬೇಡ್ಕರ್‌ ಪ್ರತಿಮೆ ವಿರೂಪಗೊಳಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಭೀಮ್ ಆರ್ಮಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಇಲ್ಲಿನ ಜಲಾಲ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಾಜಿದ್‌ಪುರದಲ್ಲಿ ಭಾನುವಾರ ಕೆಲ ಕಿಡಿಗೇಡಿಗಳು ಪ್ರತಿಮೆ ಮುಖಕ್ಕೆ ಕಪ್ಪು ಬಣ್ಣ ಬಳಿದ ಕಾರಣ ಘರ್ಷಣೆ ನಡೆದಿದೆ.

ಕೆಲವೇ ನಿಮಿಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ಆರಂಭಿಸಿದರು ಮತ್ತು ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದರು. ‌

ADVERTISEMENT

ಗುಂಪು ಚದುರಿಸುವ ವೇಳೆಪ್ರತಿಭಟನಕಾರರು ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದರು ಎಂದುಪೊಲೀಸ್ ವರಿಷ್ಠಾಧಿಕಾರಿ (ಅಂಬೇಡ್ಕರ್ ನಗರ) ಅಜಿತ್ ಕುಮಾರ್ ಸಿನ್ಹಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.