ADVERTISEMENT

ಉತ್ತರ ಪ್ರದೇಶದ ಶಾಸಕರ ತಂಡ ಅಯೋಧ್ಯೆಗೆ ಭೇಟಿ; ಎಸ್‌ಪಿ ಗೈರು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2024, 16:01 IST
Last Updated 11 ಫೆಬ್ರುವರಿ 2024, 16:01 IST
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಶಾಸಕರ ತಂಡವು ಅಯೋಧ್ಯೆಯ ರಾಮ ಮಂದಿರಕ್ಕೆ ಭಾನುವಾರ ಭೇಟಿ ನೀಡಿತು. 
ಪಿಟಿಐ ಚಿತ್ರ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಶಾಸಕರ ತಂಡವು ಅಯೋಧ್ಯೆಯ ರಾಮ ಮಂದಿರಕ್ಕೆ ಭಾನುವಾರ ಭೇಟಿ ನೀಡಿತು.  ಪಿಟಿಐ ಚಿತ್ರ   

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಅವರ ಸಂಪುಟದ ಎಲ್ಲ ಸಚಿವರು, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ಶಾಸಕರು, ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಕಾಂಗ್ರೆಸ್ ಹಾಗೂ ಬಿಎಸ್‌ಪಿಯ ಶಾಸಕರು ಭಾನುವಾರ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ಶ್ರೀರಾಮನಿಗೆ ನಮಿಸಿದರು.

ಉತ್ತರ ಪ್ರದೇಶದ ವಿಧಾನ ಸಭಾಧ್ಯಕ್ಷರ ಆಹ್ವಾನದ ಮೇರೆಗೆ ಎಲ್ಲ ಶಾಸಕರು ಅಯೋಧ್ಯೆಗೆ ತೆರಳಿದ್ದರು. ಆದರೆ, ಸಮಾಜವಾದಿ ಪಕ್ಷದ ಶಾಸಕರು ಅಯೋಧ್ಯೆ ಭೇಟಿ ಕಾರ್ಯಕ್ರಮದಿಂದ ಉಳಿದಿದ್ದು, ತಾವು ಪ್ರತ್ಯೇಕವಾಗಿ ರಾಮ ಮಂದಿರಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT