ADVERTISEMENT

ಉತ್ತರ ಪ್ರದೇಶದಲ್ಲಿ ಕೃಷಿ ಬಳಕೆಯ ವಿದ್ಯುತ್‌ ದರ ಶೇ 50ರಷ್ಟು ಕಡಿತ: ಸಿಎಂ ಘೋಷಣೆ

ಐಎಎನ್ಎಸ್
Published 7 ಜನವರಿ 2022, 3:07 IST
Last Updated 7 ಜನವರಿ 2022, 3:07 IST
ಯೋಗಿ ಆದಿತ್ಯನಾಥ್‌
ಯೋಗಿ ಆದಿತ್ಯನಾಥ್‌   

ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ಕೃಷಿ ಬಳಕೆಯ ವಿದ್ಯುತ್ ದರದಲ್ಲಿ ಶೇಕಡಾ 50 ರಷ್ಟು ಕಡಿತ ಘೋಷಿಸಿದೆ.

ವಿಧಾನಸಭೆ ಚುನಾವಣೆಗೆ ಮುನ್ನ ರೈತರನ್ನು ತಮ್ಮತ್ತ ಸೆಳೆಯುವ ಪ್ರಯತ್ನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು ವಿಶ್ಲೇಷಿಸಲಾಗಿದೆ.

ಈ ನಿರ್ಧಾರವು ಗ್ರಾಮೀಣ ಮತ್ತು ಅರೆ-ಗ್ರಾಮೀಣ ಪ್ರದೇಶಗಳ 13 ಲಕ್ಷಕ್ಕೂ ಹೆಚ್ಚು ಬಳಕೆದಾರರಿಗೆ ನೇರವಾಗಿ ಪ್ರಯೋಜನವಾಗಲಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮುಖ್ಯಮಂತ್ರಿಗಳ ಕಚೇರಿ ಹೊರಡಿಸಿರುವ ಆದೇಶದಲ್ಲಿ, ಉದ್ದೇಶಿತ ಗ್ರಾಹಕರನ್ನು ನಾಲ್ಕು ವರ್ಗಗಳಾಗಿ ವಿಂಗಡಿಸಲಾಗಿದೆ. ಮೀಟರ್, ಮೀಟರ್ ಇಲ್ಲದ, ಇಂಧನ ದಕ್ಷತೆಯುಳ್ಳ ಪಂಪ್‌ಗಳು ಮತ್ತು ಮೀಟರ್ ಸಹಿತ ವಿದ್ಯುತ್ ಪಡೆಯುವ ನಗರ ಪ್ರದೇಶದ ರೈತರು ಎಂದು ವಿಭಾಗಿಸಲಾಗಿದೆ. ಇದರ ಆಧಾರದ ಮೇಲೆ ದರ ಕಡಿತದ ಯೋಜನೆಗಳನ್ನು ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.