ಲಕ್ನೋ; 'ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಭಾನುವಾರ ಇಲ್ಲಿಉತ್ತರ ಪ್ರದೇಶ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದ ಕಟ್ಟಡಕ್ಕೆ ಶೀಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಈ ವೇಳೆ ಯೋಗಿ ಆದಿತ್ಯಾನಾಥ ಅವರು ಸಹ ಜೊತೆಗಿದ್ದರು.
‘ಭಾರತೀಯ ಜನತಾ ಪಕ್ಷ ಎಂದಿಗೂ ಜಾತಿ ಆಧಾರಿತವಾಗಿ ಕೆಲಸ ಮಾಡುವುದಿಲ್ಲ. ಬಡವರ ಏಳ್ಗೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ’ಎಂದು ಹೇಳಿದ್ದಾರೆ.
‘ಕಳೆದ ಆರು ವರ್ಷದಲ್ಲಿ ಉತ್ತರ ಪ್ರದೇಶ ಗಣನೀಯವಾಗಿ ಅಭಿವೃದ್ಧಿ ಹೊಂದಿದ್ದು, ಇದಕ್ಕೆ ಯೋಗಿ ಅವರ ಆಡಳಿತ ಹಾಗೂ ಅವರ ನಾಯಕತ್ವವೇ ಕಾರಣ’ಎಂದು ಹೊಗಳಿದ್ದಾರೆ.
ಮುಂದಿನ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.