ADVERTISEMENT

ಲಖನೌ: ಬೆಂಗಾವಲು ವಾಹನ ನಿಲ್ಲಿಸಿ ಆಂಬುಲೆನ್ಸ್‌ಗೆ ದಾರಿ ಬಿಟ್ಟ ಯೋಗಿ ಆದಿತ್ಯನಾಥ್

ಪಿಟಿಐ
Published 1 ಏಪ್ರಿಲ್ 2022, 13:16 IST
Last Updated 1 ಏಪ್ರಿಲ್ 2022, 13:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸಾಗುತ್ತಿದ್ದ ಮಾರ್ಗದಲ್ಲಿ ಮೊದಲು ಆಂಬುಲೆನ್ಸ್‌ ಸಾಗಲು ದಾರಿ ಮಾಡಿಕೊಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಗುರುವಾರ ಲಖನೌದಲ್ಲಿ ರಾಜ ಭವನದ ಸಮೀಪ ಈ ಘಟನೆ ನಡೆದಿರುವುದಾಗಿ ಸಂಚಾರ ವಿಭಾಗದ ಡಿಸಿಪಿ ಸುಭಾಷ್‌ ಚಂದ್ರ ಶಕ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬೆಂಗಾವಲು ವಾಹನಗಳೊಂದಿಗೆ ಹಜರತ್‌ಗಂಜ್‌ನಿಂದ ಬಂದರಿಯಾ ಬಾಗ್‌ ಕಡೆಗೆ ಹೊರಟ್ಟಿದ್ದರು.

ಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ವಾಹನ ಹಾಗೂ ಅವರ ಬೆಂಗಾವಲು ವಾಹನಗಳು ತಡೆಯಿಲ್ಲದೆ ಸಾಗಲು ಸೂಕ್ತ ಸಂಚಾರ ವ್ಯವಸ್ಥೆ ರೂಪಿಸಲಾಗಿತ್ತು. ಇತರೆ ವಾಹನಗಳ ಸಂಚಾರ ನಿಲ್ಲಿಸಲಾಗಿತ್ತು. ಹಾಗೆ ನಿಂತಿದ್ದ ವಾಹನಗಳಲ್ಲಿ ಆಂಬುಲೆನ್ಸ್‌ ಸಹ ಇತ್ತು.

ADVERTISEMENT

'ಸಾಗುವ ದಾರಿಯಲ್ಲಿ ಆಂಬುಲೆನ್ಸ್‌ ನಿಂತಿರುವುದನ್ನು ಕಂಡ ಯೋಗಿ ಆದಿತ್ಯನಾಥ್‌ ಅವರು, ನಮ್ಮ ವಾಹನಗಳ ಸಂಚಾರವನ್ನು ನಿಲ್ಲಿಸಿ ಮೊದಲು ಆಂಬುಲೆನ್ಸ್‌ ಸಾಗಲು ಅವಕಾಶ ನೀಡುವಂತೆ ತಮ್ಮ ಭದ್ರತಾ ಅಧಿಕಾರಿಗಳಿಗೆ ಸೂಚಿಸಿದರು' ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಕಂಡ ಸಾರ್ವಜನಿಕರು, ಯೋಗಿ ಅವರ ನಡೆಗೆ ಪ್ರಶಂಸೆ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.