ಲಖನೌ: ರಾಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮೃತಪಟ್ಟ ಪೊಲೀಸ್ ಸಿಬ್ಬಂದಿಯ ನಿಖರವಾದ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ ಹಿತೇಶ್ ಚಂದ್ರ ಅವಸ್ಥಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಅವರು ಎಲ್ಲ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು ಮತ್ತು ಆಯುಕ್ತರಿಗೆಪತ್ರ ಬರೆದಿದ್ದು, ʼಈ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿಗಳು ವೈಯಕ್ತಿಕವಾಗಿ ಗಮನಹರಿಸಿಲ್ಲ ಎಂಬುದನ್ನು ಇದು ತೋರುತ್ತದೆ. ಇದರಿಂದಾಗಿ ಮೃತ ಪೊಲೀಸರ ಕುಟುಂಬಕ್ಕೆ ಪರಿಹಾರದ ಹಣ ಸಿಗುತ್ತಿಲ್ಲʼ ಎಂದು ತಿಳಿಸಿದ್ದಾರೆ.
ʼಮಾಹಿತಿಯಲ್ಲಿ ಏನಾದರೂ ವ್ಯತ್ಯಾಸಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದುʼ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.