ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಾಗಿ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾರ್ಗಸೂಚಿಯಾಗಿರಲಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.
ಚುನಾವಣಾ ಪೂರ್ವದಲ್ಲಿ ಪ್ರಣಾಳಿಕೆ ತಯಾರಿಗಾಗಿ ವಿವಿಧ ಸಮಿತಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ ನಂತರ ಪ್ರಿಯಾಂಕಾ ಗಾಂಧಿ ಹೇಳಿಕೆಯನ್ನು ಪಕ್ಷವು ಪ್ರಕಟಿಸಿದೆ.
ಯುವಕರು, ಮಹಿಳೆಯರು, ರೈತರು, ವ್ಯಾಪಾರಿಗಳು, ಸಮಾಜದ ಶೋಷಿತ ಸೇರಿದಂತೆ ಎಲ್ಲಾ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಗಮನವನ್ನು ಹರಿಸಲಾಗುವುದು ಎಂದು ಪ್ರಕಟಣೆಯು ಹೇಳಿದೆ.
ಜನರ ಅಭಿಪ್ರಾಯಗಳ ಆಧಾರದಲ್ಲಿ ಸಿದ್ಧಪಡಿಸಲಾದ ಚುನಾವಣಾ ಪ್ರಣಾಳಿಕೆಗೆ ಅಂತಿಮ ರೂಪ ನೀಡುವ ಬಗ್ಗೆಯೂ ಕಾಂಗ್ರೆಸ್ ನಾಯಕರು ಚರ್ಚಿಸಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.