ADVERTISEMENT

ಉತ್ತರ ಪ್ರದೇಶ: ತ್ರಿವರ್ಣ ಧ್ವಜ ವಿತರಣೆ ಮಾಡಿದ ಕುಟುಂಬಕ್ಕೆ ಜೀವ ಬೆದರಿಕೆ

ಪಿಟಿಐ
Published 15 ಆಗಸ್ಟ್ 2022, 16:28 IST
Last Updated 15 ಆಗಸ್ಟ್ 2022, 16:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಿಜ್ನೋರ್: ತ್ರಿವರ್ಣ ಧ್ವಜ ವಿತರಣೆ ಮಾಡಿದ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಬಳಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಶಶಿ ಎಂಬ ಮಹಿಳೆ ಮತ್ತು ಆಕೆಯ ಪತಿ ಅರುಣ್ ಎಂಬುವವರು ತ್ರಿವರ್ಣ ಧ್ವಜ ವಿತರಣೆ ಮಾಡಿದ್ದರು. ಅವರ ಮನೆ ಹೊರಗೆ ಅಪರಿಚಿತ ವ್ಯಕ್ತಿ ಜೀವ ಬೆದರಿಕೆ ಪತ್ರ ಅಂಟಿಸಿದ್ದಾನೆ ಎಂದು ಹೆಚ್ಚುವರಿ ಎಸ್‌ಪಿ ಪ್ರವೀಣ್ ರಂಜನ್ ಸಿಂಗ್ ಹೇಳಿದ್ದಾರೆ.

ಬಿಜ್ನೋರ್‌ನ ಕಿರಾತ್‌ಪುರ್‌ನ ಬದ್ದುಪಡಾ ಪ್ರದೇಶದಲ್ಲಿ ಘಟನೆ ನಡೆದಿದೆ.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪ್ರವೀಣ್ ರಂಜನ್ ಸಿಂಗ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.