ADVERTISEMENT

ಒಬಿಸಿ ಮೀಸಲಾತಿ: ಆಯೋಗ ರಚಿಸಿದ ಯೋಗಿ ಸರ್ಕಾರ

ಪಿಟಿಐ
Published 29 ಡಿಸೆಂಬರ್ 2022, 5:02 IST
Last Updated 29 ಡಿಸೆಂಬರ್ 2022, 5:02 IST
ಯೋಗಿ ಆದಿತ್ಯನಾಥ್‌
ಯೋಗಿ ಆದಿತ್ಯನಾಥ್‌   

ಲಖನೌ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕಲ್ಪಿಸುವುದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಬುಧವಾರ ಐವರು ಸದಸ್ಯರನ್ನೊಳಗೊಂಡ ಆಯೋಗ ರಚಿಸಿದೆ.

ನಿವೃತ್ತ ನ್ಯಾಯಮೂರ್ತಿ ರಾಮ್‌ ಅವತಾರ್‌ ಸಿಂಗ್‌ ನೇತೃತ್ವದ ಈ ಆಯೋಗದಲ್ಲಿ ನಿವೃತ್ತ ಐಎಎಸ್‌ ಅಧಿಕಾರಿಗಳಾದ ಚೌಬ್‌ ಸಿಂಗ್‌ ವರ್ಮಾ, ಮಹೇಂದ್ರ ಕುಮಾರ್‌, ರಾಜ್ಯದ ಮಾಜಿ ಕಾನೂನು ಸಲಹೆಗಾರರಾದ ಸಂತೋಷ್‌ಕುಮಾರ್‌ ವಿಶ್ವಕರ್ಮ ಹಾಗೂ ಬ್ರಜೇಶ್‌ಕುಮಾರ್‌ ಸೋನಿ ಅವರು ಇದ್ದಾರೆ. ಇವರ ನೇಮಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ.

ಒಬಿಸಿಗೆ ಮೀಸಲಾತಿ ಕಲ್ಪಿಸದೆಯೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ಅಲಹಾಬಾದ್‌ ಹೈಕೋರ್ಟ್‌ನ ಲಖನೌ ಪೀಠ ಮಂಗಳವಾರ ಸರ್ಕಾರಕ್ಕೆ ಆದೇಶಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಕರಡು ಅಧಿಸೂಚನೆಯನ್ನೂ ರದ್ದುಗೊಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.