ADVERTISEMENT

ಛತ್ತೀಸ್‌ಗಡ ಸಿಎಂ, ಪಂಜಾಬ್ ಉಪಮುಖ್ಯಮಂತ್ರಿ ಭೇಟಿ ತಡೆಗೆ ಉ. ಪ್ರದೇಶ ಸರ್ಕಾರ ಮನವಿ

ಪಿಟಿಐ
Published 4 ಅಕ್ಟೋಬರ್ 2021, 4:55 IST
Last Updated 4 ಅಕ್ಟೋಬರ್ 2021, 4:55 IST
ಕೇಂದ್ರ ಸಚಿವರ ಆಗಮನಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ ನಂತರ ಉಂಟಾದ ಹಿಂಸಾಚಾರದ ವೇಳೆ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.
ಕೇಂದ್ರ ಸಚಿವರ ಆಗಮನಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ ನಂತರ ಉಂಟಾದ ಹಿಂಸಾಚಾರದ ವೇಳೆ ವಾಹನಕ್ಕೆ ಬೆಂಕಿ ಹಚ್ಚಲಾಗಿದೆ.   

ಲಖನೌ: ರೈತರ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರವನ್ನು ಗಮನಲ್ಲಿಟ್ಟುಕೊಂಡು ಲಖಿಂಪುರಕ್ಕೆ ಭೇಟಿ ನೀಡುವುದಾಗಿ ಘೋಷಿಸಿರುವ ಛತ್ತೀಸ್‌ಗಡದ ಮುಖ್ಯಮಂತ್ರಿ ಮತ್ತು ಪಂಜಾಬ್ ಉಪಮುಖ್ಯಮಂತ್ರಿಯ ಆಗಮನಕ್ಕೆ ಅನುಮತಿ ನೀಡಬೇಡಿ ಎಂದು ಉತ್ತರ ಪ್ರದೇಶ ಸರ್ಕಾರವು ಲಖನೌ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ವಿನಂತಿಸಿದೆ.

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಭಾನುವಾರ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ 8 ಮಂದಿ ಮೃತಪಟ್ಟಿದ್ದರು.

'ಲಖಿಂಪುರದಲ್ಲಿ ನಡೆದ ಘಟನೆ ಬಳಿಕ, ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿಗಳು ಅಲ್ಲಿ ನಿಷೇಧಾಜ್ಞೆ ವಿಧಿಸಿದ್ದಾರೆ. ಅಲ್ಲದೆ ಲಖನೌನ ಸಿಸಿಎಸ್ ವಿಮಾನ ನಿಲ್ದಾಣದಲ್ಲಿ ಛತ್ತೀಸ್‌ಗಡದ ಸಿಎಂ ಮತ್ತು ಪಂಜಾಬ್ ಉಪಮುಖ್ಯಮಂತ್ರಿ ಆಗಮನಕ್ಕೆ ಅನುಮತಿ ನೀಡಬಾರದು' ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ಅವರು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಅಕ್ಟೋಬರ್ 3 ರಂದು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಹಿಂಸಾಚಾರದ ವೇಳೆ 8 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಛತ್ತೀಸ್‌ಗಡ ಸಿಎಂ ಭೂಪೇಶ್‌ ಬಘೆಲ್‌ ಮತ್ತು ಪಂಜಾಬ್ ಉಪಮುಖ್ಯಮಂತ್ರಿ ಸುಖಜಿಂದರ್ ಎಸ್ ರಾಂಧವಾ ಅವರು ಸೋಮವಾರ ಲಖಿಂಪುರಕ್ಕೆ ಭೇಟಿ ನೀಡುವುದಾಗಿ ಘೋಷಿಸಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.