ಲಖನೌ: ಯಾವುದೇ ಹೊಸ ಮದರಾಸಗಳಿಗೆ ಸರ್ಕಾರಿ ಅನುದಾನ ನೀಡದಿರಲು ಉತ್ತರ ಪ್ರದೇಶ ಸರ್ಕಾರದ ಸಚಿವ ಸಂಪುಟವು ನಿರ್ಧರಿಸಿದೆ.
‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಾಗಲೇ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಮದರಾಸಗಳಿಗೆ ಅದನ್ನು ಮುಂದುವರಿಸಲಾಗುವುದು. ಆದರೆ, ಯಾವುದೇ ಹೊಸ ಫಲಾನುಭವಿಗಳ ಹೆಸರನ್ನು ಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ’ ಎಂದು ಉತ್ತರ ಪ್ರದೇಶದ ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯಸಚಿವ ಡಾನಿಷ್ ಅಜಾದ್ ಅನ್ಸಾರಿ ಅವರು ಬುಧವಾರ ತಿಳಿಸಿದ್ದಾರೆ.
‘ಪ್ರಸ್ತುತ ಉತ್ತರ ಪ್ರದೇಶದಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ. ಇದು ದೊಡ್ಡ ಸಂಖ್ಯೆಯಾಗಿದೆ. ಮದರಾಸಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಉದ್ದೇಶ. ಹಾಗಾಗಿ, ಯಾವುದೇ ಹೊಸ ಮದರಾಸಗಳಿಗೆ ಅನುದಾನ ನೀಡದಿರಲು ನಿರ್ಧರಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಉತ್ತರ ಪ್ರದೇಶದಲ್ಲಿ16,461 ಮದರಾಸಗಳಿವೆ. ಅದರಲ್ಲಿ 560 ಮದರಾಸಗಳಿಗೆ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.