ADVERTISEMENT

ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚಳ: ಪ್ರಿಯಾಂಕಾ

ಪಿಟಿಐ
Published 2 ಡಿಸೆಂಬರ್ 2020, 6:45 IST
Last Updated 2 ಡಿಸೆಂಬರ್ 2020, 6:45 IST
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ   

ನವದೆಹಲಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರದ ‘ಮಿಷನ್‌ ಶಕ್ತಿ’ ವಿಫಲವಾಗಿದೆ. ಇಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೂರಿದ್ದಾರೆ.

‘ಯೋಗಿ ಆದಿತ್ಯನಾಥ ಸರ್ಕಾರವು ಮಹಿಳೆಯರ ಸುರಕ್ಷತೆ ಮತ್ತು ಘನತೆ ಕಾಪಾಡುವ ನಿಟ್ಟಿನಲ್ಲಿ ‘ಮಿಷನ್‌ ಶಕ್ತಿ’ ಅಭಿಯಾನಕ್ಕೆ ಅಕ್ಟೋಬರ್‌ ತಿಂಗಳಿನಲ್ಲಿ ಚಾಲನೆ ನೀಡಿತು. ಈ ಅಭಿಯಾನದಡಿ ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕಠಿಣ ಶಿಕ್ಷೆಯನ್ನು ನೀಡಲಾಗುವುದು’ ಎಂದು ಎಚ್ಚರಿಕೆ ನೀಡಲಾಗಿತ್ತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಿಯಾಂಕಾ ಅವರು,‘ಬೂಟಾಟಿಕೆ ಮತ್ತು ಸುಳ್ಳು ಪ್ರಚಾರಗಳುಸರ್ಕಾರದ ಗುರಿಯಾಗಿದ್ದರೆ, ಈ ರೀತಿಯ ಮಿಷನ್‌ಗಳು ವಿಫಲವಾಗುತ್ತದೆ’ ಎಂದು ದೂರಿದರು.

ADVERTISEMENT

‘ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧಗಳನ್ನು ಮುಚ್ಚಿಹಾಕಲು ಬಿಜೆಪಿ ಸರ್ಕಾರ ಪ್ರಾರಂಭಿಸಿರುವ ಮಿಷನ್ ಶಕ್ತಿ ವಿಫಲವಾಗಿದೆ.ಇಲ್ಲಿ ಮಹಿಳೆಯೊಬ್ಬರ ಮೇಲೆ ಬೆಂಕಿ ಹಚ್ಚಿದ ಆರೋಪಿಗಳ ವಿರುದ್ಧ ಘಟನೆ ಸಂಭವಿಸಿದ ಒಂದು ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿದೆ. ಉತ್ತರಪ್ರದೇಶದಲ್ಲಿ ಅಪರಾಧಗಳು ಹೆಚ್ಚುತ್ತಿವೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಬದೋಹಿಯಲ್ಲಿ 21 ವರ್ಷದ ಯುವತಿಯನ್ನು ಮನೆಯೊಳಗೆ ಸುಟ್ಟುಹಾಕಲಾಗಿತ್ತು. ಆದರೆ ಈ ಸಂಬಂಧ ಪ್ರಕರಣವನ್ನು ಒಂದು ತಿಂಗಳ ಬಳಿಕ ದಾಖಲಿಸಲಾಗಿದೆ ಎಂದು ಹೇಳುವ ಮಾಧ್ಯಮ ವರದಿಯನ್ನು ಕೂಡ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.