ADVERTISEMENT

ಪುಲ್ವಾಮ: ಉಗ್ರರ ದಾಳಿಗೆ ವ್ಯಕ್ತಿ ಬಲಿ

ಪಿಟಿಐ
Published 30 ಅಕ್ಟೋಬರ್ 2023, 14:19 IST
Last Updated 30 ಅಕ್ಟೋಬರ್ 2023, 14:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಉಗ್ರರ ಗುಂಡಿನ ದಾಳಿಗೆ ತುತ್ತಾಗಿ ಗಾಯಗೊಂಡಿದ್ದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 

ಪುಲ್ವಾಮ ಜಿಲ್ಲೆಯ ರಾಜ್‌ಪೊರಾ ಪ್ರದೇಶದಲ್ಲಿ ಗುಂಡಿನ ದಾಳಿಗೆ ತುತ್ತಾದವರನ್ನು ಮುಕೇಶ್ ಸಿಂಗ್ ಎಂದು ಗುರುತಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಕಾಶ್ಮೀರ ಕಣಿವೆಯಲ್ಲಿ ಉಗ್ರರು ಎಸಗಿರುವ ಎರಡನೇ ದಾಳಿ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಭಾನುವಾರ ಈದ್ಗಾ ಮೈದಾನದಲ್ಲಿ ಸ್ಥಳೀಯ ಮಕ್ಕಳ ಜೊತೆ ಕ್ರಿಕೆಟ್ ಆಡುತ್ತಿದ್ದ ಮಸ್ರೂರ್ ಅಹ್ಮದ್ ವಾನಿ ಎಂಬ ಇನ್‌ಸ್ಪೆಕ್ಟರ್ ಮೇಲೆ ಉಗ್ರರು ಮೂರು ಸುತ್ತಿನ ಗುಂಡು ಹಾರಿಸಿದ್ದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.