ಮುಜಾಫರ್ನಗರ (ಪಿಟಿಐ): ಮಹಿಳೆಯೊಬ್ಬರಿಗೆ ವರದಕ್ಷಿಣೆಗಾಗಿ ಆಕೆಯ ಗಂಡ ಹಾಗೂ ಆತನ ಕುಟುಂಬ ಸದಸ್ಯರು ಕಿರುಕುಳ ನೀಡಿ ಒತ್ತಾಯದಿಂದ ಆ್ಯಸಿಡ್ ಕುಡಿಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.
ನ್ಯೂ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಥೇಡಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಸಂತ್ರಸ್ತೆಯನ್ನು ರೇಷ್ಮಾ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ಈ ಸಂಬಂಧ ಸಂತ್ರಸ್ತ ಮಹಿಳೆಯ ಕುಟುಂಬದಿಂದ ದೂರು ದಾಖಲಿಸಲಾಗಿದೆ. ವರದಕ್ಷಿಣೆ ನೀಡುವಂತೆ ರೇಷ್ಮಾ ಅವರ ಗಂಡನ ಕುಟುಂಬ ಸದಸ್ಯರು ಕಿರುಕುಳ ನೀಡಿದ್ದಾರೆ. ಅವರೆಲ್ಲ ಸೇರಿ ಆಕೆಗೆ ಆ್ಯಸಿಡ್ ಕುಡಿಸಿದ ಪರಿಣಾಮ ರೇಷ್ಮಾ ಸಾವನ್ನಪ್ಪಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಗಂಡನ ಮನೆಯಲ್ಲಿ ಮಹಿಳೆಯ ಮೃತದೇಹ ವಶಪಡಿಸಿಕೊಂಡಾಗ ಆಕೆಯ ಮುಖದ ಮೇಲೆ ಸುಟ್ಟ ಗಾಯದ ಗುರುತುಗಳಿದ್ದವು ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.