ADVERTISEMENT

ತುಂಗಾ ಮೇಲ್ದಂಡೆ ಯೋಜನೆ: 23,690 ಹೆಕ್ಟೇರ್‌ಗೆ ನೀರಾವರಿ

​ಪ್ರಜಾವಾಣಿ ವಾರ್ತೆ
Published 27 ಜುಲೈ 2023, 14:22 IST
Last Updated 27 ಜುಲೈ 2023, 14:22 IST
ರಟ್ಟೀಹಳ್ಳಿ ತಾಲ್ಲೂಕಿನ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ದೃಶ್ಯ (ಸಂಗ್ರಹ ಚಿತ್ರ)
ರಟ್ಟೀಹಳ್ಳಿ ತಾಲ್ಲೂಕಿನ ತುಂಗಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ದೃಶ್ಯ (ಸಂಗ್ರಹ ಚಿತ್ರ)   

ನವದೆಹಲಿ: ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ನೀರಾವರಿ ಯೋಜನೆಯ ಶೇ 98.72 ಕಾಮಗಾರಿ ಪೂರ್ಣಗೊಂಡಿದ್ದು, 23,690 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ತಿಳಿಸಿದೆ. 

ಲೋಕಸಭೆಯಲ್ಲಿ ಗುರುವಾರ ಲಿಖಿತ ಉತ್ತರ ನೀಡಿರುವ ಇಲಾಖೆಯ ರಾಜ್ಯ ಸಚಿವ ಬಿಶ್ವೇಶ್ವರ ತುಡು, ಈ ಯೋಜನೆಗೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಭಾಗಶಃ ಆರ್ಥಿಕ ನೆರವು ನೀಡಿದೆ ಎಂದು ತಿಳಿಸಿದ್ದಾರೆ. 

ಈ ಯೋಜನೆಯ ಅಂತರ್‌ ರಾಜ್ಯ ಅಂಶಗಳು ಹಾಗೂ ಜಲವಿಜ್ಞಾನ ಸೇರಿದಂತೆ ವಿವಿಧ ತಾಂತ್ರಿಕ– ಆರ್ಥಿಕ ಅಂಶಗಳನ್ನು ಕೇಂದ್ರ ಜಲ ಆಯೋಗವು 2013ರಲ್ಲಿ ಮೌಲ್ಯಮಾಪನ ಮಾಡಿದೆ. ಈ ಮೌಲ್ಯಮಾಪನದ ಬಳಿಕ ಸಚಿವಾಲಯದ ನೀರಾವರಿ ಸಲಹಾ ಸಮಿತಿಯು ಯೋಜನೆಗೆ 2013ರ ಅಕ್ಟೋಬರ್‌ನಲ್ಲಿ ಒಪ್ಪಿಗೆ ನೀಡಿತು. ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ-I ಕರ್ನಾಟಕ ರಾಜ್ಯಕ್ಕೆ ಹಂಚಿಕೆ ಮಾಡಿರುವ ನೀರನ್ನು ಮಾತ್ರ ಈ ಯೋಜನೆಗೆ ಬಳಸಿಕೊಳ್ಳಬೇಕು ಎಂದು ಜಲ ಆಯೋಗವು ಸೂಚಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.