ADVERTISEMENT

ಉತ್ತರ ಪ್ರದೇಶ: ಜನ್ಮದಿನದಂದೇ ಗಂಗಾ ನದಿಯಲ್ಲಿ ಮುಳುಗಿ ಸಹೋದರರ ಸಾವು 

ಪಿಟಿಐ
Published 19 ಏಪ್ರಿಲ್ 2023, 4:35 IST
Last Updated 19 ಏಪ್ರಿಲ್ 2023, 4:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬುಲಂದ್‌ಶಹರ್(ಉತ್ತರ ಪ್ರದೇಶ) ಜನ್ಮದಿನದ ಆಚರಣೆ ವೇಳೆ ಗಂಗಾ ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಇಬ್ಬರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ದುರ್ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ಲಕ್ಷ್ಯ(19) ಹಾಗೂ ಅಭಿಷೇಕ್ (22) ಎಂದು ಗುರುತಿಸಲಾಗಿದೆ. ಲಕ್ಷ್ಯ ಜನ್ಮದಿನದ ಸಂಭ್ರಮದಲ್ಲಿದ್ದರು.

ADVERTISEMENT

ಮಾಸ್ತರಮ್‌ ಘಾಟ್‌ನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಸಹೋದರರಿಬ್ಬರೂ ಆಳಕ್ಕೆ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈಜುಗಾರರ ಸಹಾಯದಿಂದ ಮೃತ ದೇಹಗಳನ್ನು ನದಿಯಿಂದ ಹೊರತೆಗೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.