ADVERTISEMENT

ಉತ್ತರಪ್ರದೇಶ: 841 ಸರ್ಕಾರಿ ವಕೀಲರ ವಜಾಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಆಗಸ್ಟ್ 2022, 14:15 IST
Last Updated 2 ಆಗಸ್ಟ್ 2022, 14:15 IST
 ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಲಖನೌ:ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ 841 ಜನ ಸರ್ಕಾರಿ ವಕೀಲರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಜಾಗೊಳಿಸಿ ಆದೇಶಿಸಿದೆ.

ಕಾನೂನು ಮತ್ತು ನ್ಯಾಯಾಂಗ ಇಲಾಖೆಯ ಪ್ರಧಾನ ಕಾರ್ಯದರ್ಶಿ ನಿಕುಂಜ್ ಅವರು ಈ ಆದೇಶ ಹೊರಡಿಸಿದ್ದಾರೆ.ಆದರೆ, ಸರ್ಕಾರ ತನ್ನ ಆದೇಶದಲ್ಲಿ ವಕೀಲರ ವಜಾಕ್ಕೆ ಕಾರಣವನ್ನು ನೀಡಿಲ್ಲ.

ಅಲಹಾಬಾದ್ ಹೈಕೋರ್ಟ್ ಪೀಠದ ಎಲ್ಲ ಸಾರ್ವಜನಿಕ ಅಭಿಯೋಜಕರು, 505 ಜನ ರಾಜ್ಯ ನ್ಯಾಯಾಂಗ ಅಧಿಕಾರಿಗಳು, ಲಖನೌ ಹೈಕೋರ್ಟ್ ಪೀಠದ 336 ಜನ ಸರ್ಕಾರಿ ವಕೀಲರನ್ನು ವಜಾ ಮಾಡಲಾಗಿದೆ. ಇದರ ಜತೆಗೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿನೋದ್ ಕಾಂತ್ ಅವರನ್ನೂ ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

ADVERTISEMENT

ಪ್ರಯಾಗ್‌ರಾಜ್ ನ್ಯಾಯಾಲಯದ 26 ಹೆಚ್ಚುವರಿ ಕಾಯಂ ವಕೀಲರು, 179 ಜನ ಕಾಯಂ ವಕೀಲರಿಗೆ ಕಡ್ಡಾಯ ರಜೆ ನೀಡಲಾಗಿದೆ. ಇದರ ಜೊತೆಗೆ59 ಹೆಚ್ಚುವರಿ ಮುಖ್ಯ ಸ್ಥಾಯಿ ಮಂಡಳಿ ಮತ್ತು ಸ್ಥಾಯಿ ಪರಿಷತ್ ಸದಸ್ಯರನ್ನೂ ವಜಾ ಮಾಡಲಾಗಿದೆ.

ಸರ್ಕಾರದ ವಜಾ ಆದೇಶ ಪ್ರತಿಯಲ್ಲಿ ಯಾವುದೇ ನಿಖರವಾದ ಕಾರಣ ಕೊಟ್ಟಿಲ್ಲ. ಸರ್ಕಾರದ ಮೂಲಗಳ ಪ್ರಕಾರಕಾನೂನು ಅಧಿಕಾರಿಗಳ ಕಾರ್ಯಕ್ಷಮತೆ ಸರಿ ಇಲ್ಲದ ಕಾರಣ ಸರ್ಕಾರ ಈ ಕಠಿಣ ಕ್ರಮ ಕೈಗೊಂಡಿದೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.