ಸುಲ್ತಾನ್ಪುರ (ಉತ್ತರ ಪ್ರದೇಶ):ಸುಲ್ತಾನ್ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ನೌಶಾದ್ ಖಾನ್ (42) ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ. ನೌಶಾದ್ ಅವರ ಕಾರು ಹಾಗೂ ಟ್ರಕ್ ನಡುವೆ ಅಪಘಾತವಾಗಿದೆ.
ಈ ಮಾಹಿತಿಯನ್ನು ಪೊಲೀಸರು ಖಚಿತಪಡಿಸಿದ್ದು,ಗೊಸಿಯಾಗಂಜ್ ಪ್ರದೇಶದಲ್ಲಿರುವ ತತಿಯಾನಗರ್ ಬಳಿ ಅಪಘಾತ ಸಂಭವಿಸಿದೆ.ನೌಶಾದ್ ಅವರು ತಮ್ಮ ಕಾರಿನಲ್ಲಿ ಸೋಮವಾರ ಸಂಜೆ ಮನೆಗೆ ಹಿಂದಿರುಗುತ್ತಿದ್ದಾಗ, ಟ್ರಕ್ ಡಿಕ್ಕಿ ಹೊಡೆದಿದೆಎಂದು ತಿಳಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ಈ ವರೆಗೆ ಯಾರೊಬ್ಬರನ್ನೂ ಬಂಧಿಸಿಲ್ಲ.
ಉತ್ತರ ಪ್ರದೇಶ ಕಾಂಗ್ರೆಸ್ ಘಟಕವು, ಟ್ವಿಟರ್ನಲ್ಲಿ ಸಂತಾಪ ಸೂಚಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.