ಬಂದಾ (ಉತ್ತರ ಪ್ರದೇಶ): ಇಲ್ಲಿನ ಗ್ರಾಮವೊಂದರಲ್ಲಿ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆ ಮಾಡಲಾಗಿದೆ. ಬಳಿಕ ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
40 ವರ್ಷದ ಮಹಿಳೆಯು ರಾಜ್ಕುಮಾರ್ ಶುಕ್ಲಾ ಅವರ ಹಿಟ್ಟಿನ ಗಿರಣಿ ಸ್ವಚ್ಛ ಮಾಡಲು ಮಂಗಳವಾರ ಅವರ ಮನೆಗೆ ತೆರಳಿದ್ದರು. ಸ್ಥಳಕ್ಕೆ ಮಹಿಳೆಯ ಪುತ್ರಿ ತೆರಳಿದಾಗ, ಕೋಣೆಯ ಒಳಗಿಂದ ಮಹಿಳೆ ಚೀರಾಡುತ್ತಿರುವುದು ಕೇಳಿಸಿತ್ತು. ಸ್ವಲ್ಪ ಸಮಯದ ನಂತರ ಬಾಗಿಲು ತೆರೆದಾಗ ಆಕೆಯ ತಾಯಿಯ ದೇಹ ಮೂರು ತುಂಡುಗಳಾಗಿ ಬಿದ್ದಿತ್ತು. ನಂತರ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಳು ಎಂದು ಪೊಲೀಸ್ ಸಿಬ್ಬಂದಿಯೊಬ್ಬರು ತಿಳಿಸಿದರು.
ಈ ಬೆನ್ನಲ್ಲೇ ರಾಜ್ಕುಮಾರ್ ಶುಕ್ಲಾ, ಆತನ ಸಹೋದರಾದ ಬವುವಾ ಶುಕ್ಲಾ ಮತ್ತು ರಾಮಕೃಷ್ಣ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಹೇಳಿದರು.
ಈ ಮಧ್ಯೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ದಲಿತ ಮಹಿಳೆಯ ಅತ್ಯಾಚಾರ ಮತ್ತು ಕಗ್ಗೊಲೆ ವಿಷಯ ತಿಳಿದು ತೀವ್ರ ಆಘಾತವಾಗಿದೆ. ಉತ್ತರ ಪ್ರದೇಶದ ಮಹಿಳೆಯರು ಭಯಭೀತರಾಗಿದ್ದಾರೆ ಮತ್ತು ಕ್ರೋಧಗೊಂಡಿದ್ದಾರೆ’ ಎಂದು ಅವರು ‘ಎಕ್ಸ್’ನಲ್ಲಿ ಹೇಳಿದ್ದಾರೆ.
ರಾಜ್ಯದ ಮಹಿಳೆಯರು ಬಿಜೆಪಿ ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಈ ಸರ್ಕಾರದಿಂದ ಏನನ್ನಾದರು ನಿರೀಕ್ಷಿಸುವುದು ವ್ಯರ್ಥಅಖಿಲೇಶ್ ಯಾದವ್ ಸಮಾಜವಾದಿ ಪಕ್ಷದ ಅಧ್ಯಕ್ಷ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.