ಲಖನೌ: ಭಾರತೀಯ ಜನತಾ ಪಕ್ಷವು (ಬಿಜೆಪಿ) ಉತ್ತರ ಪ್ರದೇಶದಲ್ಲಿ ದ್ವೇಷ ಮತ್ತು ವಿಭಜನೆಯ ರಾಜಕೀಯ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ (ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಟೀಕಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಗೆ ಭಾನುವಾರ (ಫೆಬ್ರುವರಿ 20) ಮೂರನೇ ಹಂತದ ಮತದಾನದ ವೇಳೆ ಮತ ಚಲಾಯಿಸಿ ಮಾತನಾಡಿರುವ ಅಖಿಲೇಶ್, ಹಲವು ಮತಗಟ್ಟೆಗಳಲ್ಲಿ ಅಸಮರ್ಪಕ ನಿರ್ವಹಣೆ ಕಂಡುಬಂದಿದೆ ಎಂದೂ ಆರೋಪಿಸಿದ್ದಾರೆ.
'ನಾನು ಇಂದು ಮತ ಚಲಾಯಿಸಿದ್ದೇನೆ. ಮೂರನೇ ಹಂತದ ಮತದಾನದ ವೇಳೆವಿವಿಧ ಮತಗಟ್ಟೆಗಳಲ್ಲಿ ಅಸಮರ್ಪಕ ನಿರ್ವಹಣೆಯ ಹಲವು ಪ್ರಕರಣಗಳು ವರದಿಯಾಗಿವೆ.ಮತಯಂತ್ರಗಳು ಕೆಟ್ಟಿರುವ ಬಗ್ಗೆ ಹಲವು ಕಡೆ ದೂರುಗಳು ಬಂದಿವೆ. ಆದಾಗ್ಯೂ, ಬಿಜೆಪಿ ವಿಳಂಬ ಧೋರಣೆ ಅನುಸರಿಸುತ್ತಿದೆ.ಬಿಜೆಪಿಯು ದ್ವೇಷದ ರಾಜಕಾರಣ ಮಾಡುತ್ತಿದ್ದು, ಜನರನ್ನು ವಿಭಜಿಸುತ್ತಿದೆ' ಎಂದು ದೂರಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆಗೆಫೆಬ್ರುವರಿ 20ರಂದು ಮೂರನೇ ಹಂತದ ಮತದಾನ ನಡೆದಿದೆ. 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಶೇ 61.02ರಷ್ಟು ಮಂದಿ ಮತ ಚಲಾಯಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.