ADVERTISEMENT

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉ.ಪ್ರದೇಶ ರಾಜ್ಯಪಾಲರ ಅಂಕಿತ

ಪಿಟಿಐ
Published 28 ನವೆಂಬರ್ 2020, 6:15 IST
Last Updated 28 ನವೆಂಬರ್ 2020, 6:15 IST
ಆನಂದಿಬೆನ್‌ ಪಟೇಲ್‌
ಆನಂದಿಬೆನ್‌ ಪಟೇಲ್‌   

ಲಖನೌ: ಬಲವಂತದ ಅಥವಾ ಅಪ್ರಾಮಾಣಿಕ ಧಾರ್ಮಿಕ ಮತಾಂತರಗಳನ್ನು ನಿಷೇಧಿಸುವ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಶನಿವಾರ ಅಂಕಿತ ಹಾಕಿದ್ದಾರೆ.

ವಿವಾಹದ ಸಲುವಾಗಿ ನಡೆಯುವ,ಬಲವಂತದ ಅಥವಾ 'ಅಪ್ರಾಮಾಣಿಕ' ಧಾರ್ಮಿಕ ಮತಾಂತರಗಳನ್ನು ತಡೆಯುವ ಕರಡು ಸುಗ್ರೀವಾಜ್ಞೆಗೆಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯ ಸಚಿವ ಸಂಪುಟವು ಈ ವಾರದ ಆರಂಭದಲ್ಲಿಅನುಮೋದನೆ ನೀಡಿತ್ತು. ಈ ಕಾನೂನು ಉಲ್ಲಂಘಿಸುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT