ಗೊಂಡಾ (ಯುಪಿ): ಕಿಡಿಗೇಡಿಗಳು ವೈದ್ಯಕೀಯ ವಿದ್ಯಾರ್ಥಿಯನ್ನು ಅಪಹರಿಸಿದ್ದು, ಕುಟುಂಬಸ್ಥರಿಂದ ₹70 ಲಕ್ಷ ಬೇಡಿಕೆ ಇಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಹ್ರೇಚ್ ಜಿಲ್ಲೆಯಲ್ಲಿ ಪಯಾಗ್ಪುರ ಪ್ರದೇಶದ ನಿವಾಸಿ ಗೌರವ್ ಹಲ್ದಾರ್ ಅವರು ಸ್ಥಳೀಯ ಖಾಸಗಿ ಸಂಸ್ಥೆಯೊಂದರಲ್ಲಿ ಬಿಎಎಂಎಸ್ (ಬ್ಯಾಚುಲರ್ ಇನ್ ಆಯುರ್ವೇದ ಆ್ಯಂಡ್ ಸರ್ಜರಿ) ಅಧ್ಯಯನ ಮಾಡುತ್ತಿದ್ದು, ಸೋಮವಾರ ಹಾಸ್ಟೆಲ್ನಿಂದ ಹೊರಟ ಗೌರವ್ ನಾಪತ್ತೆಯಾಗಿದ್ದಾರೆ ಎಂದು ಎಸ್ಪಿ ಶೈಲೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಗೌರವ್ ಅವರ ತಂದೆಗೆ ಮಂಗಳವಾರ ಮಧ್ಯಾಹ್ನ ಕರೆ ಮಾಡಿದ್ದ ಅಪಹರಣಕಾರರು, ₹70 ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಮಗನನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಗೌರವ್ ಅಪಹರಣ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.