ಸಂಭಲ್ (ಉತ್ತರ ಪ್ರದೇಶ): ಕಳೆದ ವರ್ಷ ಜಾಮಾ ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ ನಡೆದಿದ್ದ ಸಂಭಲ್ನಲ್ಲಿ ಪೊಲೀಸ್ ಹೊರಠಾಣೆಯನ್ನು ಗುರುವಾರ ಉದ್ಘಾಟಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಖಾಸ ಪೊಲೀಸ್ ಠಾಣಾ ವ್ಯಾಪ್ತಿಯ ಹಿಂದೂಪುರ ಖೇಡಾದ ಬಳಿ ಪೊಲೀಸ್ ಹೊರಠಾಣೆಯನ್ನು ಸ್ಥಾಪಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ಬಿಷ್ಣೋಯಿ ಹೇಳಿದರು.
ಹೆಚ್ಚಿನ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕೆಲವು ಆಯಕಟ್ಟಿನ ಪ್ರದೇಶವನ್ನು ಗುರುತಿಸಲಾಗಿದೆ. ಸಂಭಲ್ನಲ್ಲಿ 39 ಚೆಕ್ಪೋಸ್ಟ್ ನಿರ್ಮಿಸುವ ಯೋಜನೆಯ ಭಾಗವಾಗಿ ಈ ಹೊರಠಾಣೆಯನ್ನು ಸ್ಥಾಪಿಸಲಾಗಿದೆ ಎಂದರು.
ಮುಂದಿನ ಹತ್ತು ದಿನಗಳಲ್ಲಿ ಇನ್ನೂ ಎರಡು ಹೊರಠಾಣೆಗಳನ್ನು ಉದ್ಘಾಟಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.