ನವದೆಹಲಿ: ಉತ್ತರಾಖಂಡದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಪ್ರವಾಹದ ಸ್ಥಿತಿ ಉಂಟಾಗಿದ್ದು, ನೀರಿನ ರಭಸಕ್ಕೆ ಯುವಕನೊಬ್ಬ ಕೊಚ್ಚಿ ಹೋದ ಘಟನೆ ನಡೆದಿದೆ.
ಈ ಕುರಿತು ಸುದ್ದಿ ಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.
ಇದನ್ನೂ ಓದಿ:Taiwan Earthquake: ಅಲುಗಾಡಿದ ರೈಲು, ಮೂರು ಅಂತಸ್ತಿನ ಕಟ್ಟಡ ಕುಸಿತ
ಫತೇಪುರ್ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ರಸ್ತೆ ಮೇಲೆ ನೀರು ಹರಿದು ಹೋಗುತ್ತಿದೆ. ಯುವಕ ರಸ್ತೆ ದಾಟಲುಯತ್ನಿಸುತ್ತಿದ್ದವೇಳೆ ಮಳೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾನೆ.
ಯುವಕನ ಹುಡುಕಾಟಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಎಸ್ಡಿಎಂ ಮನೀಷ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.