ADVERTISEMENT

ಉತ್ತರಾಖಂಡ | ಅಲಕಾನಂದ ನದಿಗೆ ಉರುಳಿದ ಬಸ್: 40 KM ದೂರದಲ್ಲಿ ಮಹಿಳೆ ಶವ ಪತ್ತೆ

ಪಿಟಿಐ
Published 28 ಜೂನ್ 2025, 12:54 IST
Last Updated 28 ಜೂನ್ 2025, 12:54 IST
<div class="paragraphs"><p>ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ&nbsp;</p></div>

ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ 

   

–ಪಿಟಿಐ ಚಿತ್ರ

ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗದ ಅಲಕಾನಂದ ನದಿಗೆ ಬಸ್ ಉರುಳಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ADVERTISEMENT

ಬಸ್ ನದಿಗೆ ಬಿದ್ದ ಸ್ಥಳದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶ್ರೀನಗರ-ಕೀರ್ತಿನಗರ ಅಣೆಕಟ್ಟು ಪ್ರದೇಶದಲ್ಲಿ ಗುಜರಾತ್ ಮೂಲದ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ರಾಜಸ್ಥಾನ, ಗುಜರಾತ್‌. ಮಧ್ಯಪ್ರದೇಶ, ಮಹಾರಾಷ್ಟ್ರದ ಒಟ್ಟು 31 ಮಂದಿ ಭಕ್ತರು ಬದರಿನಾಥಕ್ಕೆ ಹೊರಟಿದ್ದರು. ಈ ವೇಳೆ ರುದ್ರಪ್ರಯಾಗದ ದೋಲ್‌ತೀರ್ ಪ್ರದೇಶದಲ್ಲಿ ಗುರುವಾರ ಅಪಘಾತ ಸಂಭವಿಸಿತ್ತು.

ಘಟನೆಯಲ್ಲಿ ಬಸ್‌ ಚಾಲಕ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಆ ಪೈಕಿ ನಾಲ್ವರು ರುದ್ರಪ್ರಯಾಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ನಾಲ್ವರು ಋಷಿಕೇಶದ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್ ಸೇರಿದಂತೆ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಐವರ ಮೃತದೇಹಗಳನ್ನು ಹೊರಕ್ಕೆ ತರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.