ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಎನ್ಡಿಆರ್ಎಫ್ ಸಿಬ್ಬಂದಿ
–ಪಿಟಿಐ ಚಿತ್ರ
ರುದ್ರಪ್ರಯಾಗ: ಉತ್ತರಾಖಂಡದ ರುದ್ರಪ್ರಯಾಗದ ಅಲಕಾನಂದ ನದಿಗೆ ಬಸ್ ಉರುಳಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಬಸ್ ನದಿಗೆ ಬಿದ್ದ ಸ್ಥಳದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶ್ರೀನಗರ-ಕೀರ್ತಿನಗರ ಅಣೆಕಟ್ಟು ಪ್ರದೇಶದಲ್ಲಿ ಗುಜರಾತ್ ಮೂಲದ ಮಹಿಳೆಯ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ರಾಜಸ್ಥಾನ, ಗುಜರಾತ್. ಮಧ್ಯಪ್ರದೇಶ, ಮಹಾರಾಷ್ಟ್ರದ ಒಟ್ಟು 31 ಮಂದಿ ಭಕ್ತರು ಬದರಿನಾಥಕ್ಕೆ ಹೊರಟಿದ್ದರು. ಈ ವೇಳೆ ರುದ್ರಪ್ರಯಾಗದ ದೋಲ್ತೀರ್ ಪ್ರದೇಶದಲ್ಲಿ ಗುರುವಾರ ಅಪಘಾತ ಸಂಭವಿಸಿತ್ತು.
ಘಟನೆಯಲ್ಲಿ ಬಸ್ ಚಾಲಕ ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಆ ಪೈಕಿ ನಾಲ್ವರು ರುದ್ರಪ್ರಯಾಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದ ನಾಲ್ವರು ಋಷಿಕೇಶದ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎನ್ಡಿಆರ್ಎಫ್, ಎಸ್ಡಿಆರ್ಎಫ್ ಸೇರಿದಂತೆ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಐವರ ಮೃತದೇಹಗಳನ್ನು ಹೊರಕ್ಕೆ ತರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.