ADVERTISEMENT

ಉತ್ತರಾಖಂಡ: ಶಾಸಕರು, ಮಂತ್ರಿಗಳ ಸಂಬಳ ಕಡಿತ ಸಚಿವ ಸಂಪುಟ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2020, 9:12 IST
Last Updated 8 ಏಪ್ರಿಲ್ 2020, 9:12 IST
ಉತ್ತರಾಖಂಡ ಸಚಿವ ಮದನ್ ಕೌಶಿಕ್
ಉತ್ತರಾಖಂಡ ಸಚಿವ ಮದನ್ ಕೌಶಿಕ್    

ಉತ್ತರಾಖಂಡ: ಮಂತ್ರಿಗಳು ಹಾಗೂ ಶಾಸಕರ ಸಂಬಳದಲ್ಲಿ ಶೇ 30ರಷ್ಟು ಕಡಿತಗೊಳಿಸುವ ತೀರ್ಮಾನಕ್ಕೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಈ ಸಂಬಂಧ ಸಚಿವ ಹಾಗೂ ಸರ್ಕಾರದ ವಕ್ತಾರ ಮದನ್ ಕೌಶಿಕ್ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ಆದೇಶದವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ₹1ಕೋಟಿಯನ್ನು ಕಡಿತಮಾಡಲಾಗುವುದು. ಕೊರೊನಾ ಸೋಂಕು ಕಾರಣ ಈ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.