ADVERTISEMENT

ಏಕರೂಪ ನಾಗರಿಕ ಸಂಹಿತೆ: ಕರಡು ಸಮಿತಿ ನಿರ್ಧಾರಕ್ಕೆ ಉತ್ತರಾಖಂಡ ಸರ್ಕಾರ ಅಸ್ತು

ಪಿಟಿಐ
Published 23 ಡಿಸೆಂಬರ್ 2023, 6:36 IST
Last Updated 23 ಡಿಸೆಂಬರ್ 2023, 6:36 IST
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ   ಪಿಟಿಐ ಚಿತ್ರ

ಡೆಹ್ರಾಡೂನ್: ರಾಜ್ಯದಲ್ಲಿ ಜಾರಿಗೆ ತರಲು ಉದ್ದೇಶಿಸಲಾಗಿರುವ ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಕರಡು ರಚನಾ ಸಮಿತಿ ಈವರೆಗೆ ತೆಗೆದುಕೊಂಡ ನಿರ್ಧಾರಗಳನ್ನು ಉತ್ತರಾಖಂಡ ಸರ್ಕಾರ ಅನುಮೋದಿಸಿದೆ.

ಶುಕ್ರವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್‌.ಎಸ್ ಸಂಧು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನ ಪ್ರಕಾಶ್ ದೇಸಾಯಿ ಅವರ ನೇತೃತ್ವದಲ್ಲಿ 2022ರಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಜನವರಿಯಲ್ಲಿ ಕರಡು ಸಲ್ಲಿಸುವ ಸಾಧ್ಯತೆ ಇದೆ. ಬಳಿಕ ಅದನ್ನು ಜಾರಿಗೆ ತರುವ ಪ್ರಕ್ರಿಯೆ ಆರಂಭವಾಗಲಿದೆ.

ADVERTISEMENT

ಇದೇ ವೇಳೆ ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ₹8ಕ್ಕೆ ಮಾಸಿಕ 1 ಕೆ.ಜಿ ಅಯೊಡಿನ್‌ಯುಕ್ತ ಉಪ್ಪು ನೀಡುವುದು ಸೇರಿ ಹಲವು ತೀರ್ಮಾನಗಳಿಗೆ ಸಂಪುಟ ಅನುಮೋದನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.