ADVERTISEMENT

ಉತ್ತರಾಖಂಡದಲ್ಲಿ ಹಿಮಪಾತ: ಮತ್ತೊಂದು ಶವ ಪತ್ತೆ; ಮೃತರ ಸಂಖ್ಯೆ 62ಕ್ಕೆ ಏರಿಕೆ

ಪಿಟಿಐ
Published 19 ಫೆಬ್ರುವರಿ 2021, 8:40 IST
Last Updated 19 ಫೆಬ್ರುವರಿ 2021, 8:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಗೋಪೇಶ್ವರ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನೀರ್ಗಲ್ಲು ಕುಸಿತದಿಂದ ಉಂಟಾದ ಪ್ರವಾಹಕ್ಕೆ ಸಿಲುಕಿದ್ದವರ ಪತ್ತೆ ಕಾರ್ಯ 13 ನೇ ದಿನವೂ ಮುಂದುವರಿದಿದ್ದು, ಗುರುವಾರ ಶವವೊಂದನ್ನು ಹೊರತೆಗೆಯಲಾಗಿದೆ.

‘ಎನ್‌ಟಿ‍‍ಸಿ ತಪೋವನ–ವಿಷ್ಣುಗಡ್ ಯೋಜನೆಯ ಸ್ಥಳದಲ್ಲಿ ಗುರುವಾರ ರಾತ್ರಿ ಶವ ಪತ್ತೆಯಾಗಿದೆ’ ಎಂದು ಚಮೋಲಿ ಜಿಲ್ಲಾ ಪೊಲೀಸರು ಶುಕ್ರವಾರ ತಿಳಿಸಿದರು.

‘ಈವರೆಗೆ ಒಟ್ಟು 62 ಶವಗಳು ಪತ್ತೆಯಾಗಿವೆ. 142 ಜನರು ನಾಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ತಪೋವನ–ವಿಷ್ಣುಗಡ್ ಯೋಜನೆಯ ಸುರಂಗದಲ್ಲಿ 13 ಶವಗಳು ಪತ್ತೆಯಾಗಿವೆ. ಇದನ್ನು ಹೊರತು‍‍ಪಡಿಸಿ ಹಲವೆಡೆ 28 ಕೈಕಾಲುಗಳು ಸಿಕ್ಕಿವೆ. ಪತ್ತೆಯಾಗಿರುವ 62 ಶವಗಳಲ್ಲಿ 33 ಜನರನ್ನು ಗುರುತಿಸಲಾಗಿದೆ. ಉಳಿದವರ ಡಿಎನ್‌ಎಗಳನ್ನು ಸಂರಕ್ಷಿಸಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.