ADVERTISEMENT

PHOTOS | ಉತ್ತರಾಖಂಡದಲ್ಲಿ ಹಿಮಪಾತ: ವಿಪತ್ತು ಪಡೆ ಜಂಟಿ ಕಾರ್ಯಾಚರಣೆಯಲ್ಲಿ ಹಲವರ ರಕ್ಷಣೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ಬಳಿ ಹಿಮ ಕುಸಿತದಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಸಿಲುಕಿ ಹಲವರು ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದವರನ್ನು ಪತ್ತೆಮಾಡಲು ಶೋಧಕಾರ್ಯ ಮುಂದುವರಿದಿದೆ. ಋಷಿಗಂಗಾ ನದಿಯ ದಂಡೆಯಲ್ಲಿರುವ ರೈನಿ ಪ್ರದೇಶ ದಲ್ಲಿ ಋಷಿಗಂಗಾ ಜಲವಿದ್ಯುತ್ ಯೋಜನೆಯ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಈ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ತಪೋವನದ ಬಳಿ ಸುರಂಗವೊಂದರಲ್ಲಿ ಸಿಲುಕಿದ್ದ 30 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ.

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 11:43 IST
Last Updated 8 ಫೆಬ್ರುವರಿ 2021, 11:43 IST
ಉತ್ತರಾಖಂಡದಲ್ಲಿ ನೈಸರ್ಗಿಕ ವಿಕೋಪಕ್ಕೆ ಅಪಾರ ನಾಶ-ನಷ್ಟ
ಉತ್ತರಾಖಂಡದಲ್ಲಿ ನೈಸರ್ಗಿಕ ವಿಕೋಪಕ್ಕೆ ಅಪಾರ ನಾಶ-ನಷ್ಟ   
ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಭಾರಿ ಹಿಮಪ್ರವಾಹ
ವಿಪತ್ತು ನಿರ್ವಹಣಾ ಪಡೆಯಿಂದ ರಕ್ಷಣಾ ಕಾರ್ಯಾಚರಣೆ
ಈಗಾಗಲೇ ಹಲವಾರು ಕಾರ್ಮಿಕರನ್ನು ರಕ್ಷಿಸಲಾಗಿದೆ.
ತಪೋವನದ ಬಳಿ ಸುರಂಗವೊಂದರಲ್ಲಿ ಸಿಲುಕಿದ್ದ 30 ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿದೆ
ಹಿಮ ನದಿ ಕುಸಿತದ ಹಿಂದಿನ ಕಾರಣದ ಅಧ್ಯಯನಕ್ಕಾಗಿ ತಂಡ ರಚಿಸಲಾಗಿದೆ.
2013ರಲ್ಲೂ ಸಂಭವಿಸಿತ್ತು ಹಿಮಪಾತ ದುರಂತ
ಹಿಮ ಕುಸಿತದಿಂದ ಏಕಾಏಕಿ ನೀರು ಉಕ್ಕಿ ಹರಿದು ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು.
ರಿಷಿಗಂಗಾ ಜಲವಿದ್ಯುತ್ ಯೋಜನೆಗೆ ಹಾನಿ
ಹಲವು ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ
ಐಟಿಬಿಪಿ ತಂಡದಿಂದಲೂ ರಕ್ಷಣಾ ಕಾರ್ಯಾಚರಣೆ
ಸುರಂಗದಲ್ಲಿ ತೆರವು ಕಾರ್ಯಾಚರಣೆ ಜಾರಿಯಲ್ಲಿದೆ.
ಉತ್ತರಾಖಂಡ ಪ್ರವಾಹದ ಭಯಾನಕ ದೃಶ್ಯ
ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಜಾಗತಿಕ ತಾಪಮಾನ ಏರಿಕೆಯಿಂದ ಹಿಮ ಕುಸಿತವುಂಟಾಗಿರುವ ಸಾಧ್ಯತೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.