ADVERTISEMENT

ಸೆಪ್ಟೆಂಬರ್ 14ರಿಂದ ಮಾತಾ ವೈಷ್ಣೋದೇವಿ ಯಾತ್ರೆ ಪುನರಾರಂಭ

ಪಿಟಿಐ
Published 12 ಸೆಪ್ಟೆಂಬರ್ 2025, 13:00 IST
Last Updated 12 ಸೆಪ್ಟೆಂಬರ್ 2025, 13:00 IST
   

ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರೆ ಸೆ.14ರಿಂದ ಪುನರಾರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 26 ರಂದು ಸಂಭವಿಸಿದ ಭೂಕುಸಿತದಲ್ಲಿ 34 ಜನ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದರು. ಬಳಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.

ಸದ್ಯ ಪೂರಕವಾದ ಹವಾಮಾನ ಇರುವುದರಿಂದ ವೈಷ್ಣೋದೇವಿ ಯಾತ್ರೆಯನ್ನು ಪುನರಾರಂಭಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಹಾಗೂ ಬುಕಿಂಗ್‌ಗಾಗಿ www.maavaishnodevi.org ವೆಬ್‌ಸೈಟ್‌ಗೆ ಭೇಟಿ ನೀಡಿ ಎಂದು ಶ್ರೀ ಮಾತಾ ವೈಷ್ಣೋದೇವಿ ಮಂಡಳಿ (ಎಸ್‌ಎಂವಿಡಿಬಿ) ‘ಎಕ್ಸ್‌’ನಲ್ಲಿ ಮಾಹಿತಿ ನೀಡಿದೆ.

ADVERTISEMENT

ಹವಾಮಾನ ಪರಿಸ್ಥಿತಿ ಪ್ರತಿಕೂಲವಾದರೆ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆಯಿದೆ ಎಂದೂ ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.