ADVERTISEMENT

ವಾಜಪೇಯಿ ಜನ್ಮದಿನ: ಇಂದು ರೈತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2020, 3:28 IST
Last Updated 25 ಡಿಸೆಂಬರ್ 2020, 3:28 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ    

ನವದೆಹಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಮಧ್ಯಾಹ್ನ 12ಕ್ಕೆ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡುವರು. ಇದೇ ವೇಳೆ ರೈತರಿಗೆ ನೂತನ ಕೃಷಿ ಕಾಯ್ದೆಯ ನೀತಿಗಳ ಬಗ್ಗೆ ವಿವರಣೆ ನೀಡಲಿದ್ದಾರೆ.

ಇಂದೇ,ಪ್ರಧಾನ ಮಂತ್ರಿ ಕಿಸಾನ್‌ ಯೋಜನೆಗೆ ₹ 18,000 ಕೋಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ, ಹರಿಯಾಣ ಗಡಿಯಲ್ಲಿ ರೈತ ಸಂಘಟನೆಗಳನ್ನು ಪ್ರತಿಭಟನೆಯನ್ನು ಮುಂದುವರಿಸಿದ್ದು ನೂತನ ಕಾಯ್ದೆ ಕುರಿತು ಪ್ರಧಾನಿ ಮೋದಿ ರೈತರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.