ADVERTISEMENT

‘ವಂದೇಮಾತರಂಗೂ ರಾಷ್ಟ್ರಗೀತೆ ಸ್ಥಾನಮಾನ ಕೊಡಿ’

ಪಿಟಿಐ
Published 22 ಜುಲೈ 2019, 19:35 IST
Last Updated 22 ಜುಲೈ 2019, 19:35 IST

ನವದೆಹಲಿ: ರಾಷ್ಟ್ರಗೀತೆ ಮತ್ತು ವಂದೇಮಾತರಂ ಅನ್ನು ಏಕ ರೀತಿಯಲ್ಲಿ ಪ್ರಚಾರ ಮಾಡಲು ನೀತಿಯೊಂದನ್ನು ರೂಪಿಸಬೇಕು ಎಂದು ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಬಂಕಿಮ್‌ಚಂದ್ರ ಚಟರ್ಜಿ ಅವರು ಬರೆದ ವಂದೇಮಾತರಂ ಹಾಡಿಗೆ ರವೀಂದ್ರನಾಥ ಟ್ಯಾಗೋರ್‌ ಅವರು ಬರೆದ ರಾಷ್ಟ್ರಗೀತೆ ‘ಜನಗಣಮನ’ಕ್ಕೆ ನೀಡುವ ಗೌರವವನ್ನೇ ಕೊಡಬೇಕು ಎಂದುಬಿಜೆಪಿ ಮುಖಂಡ ಮತ್ತು ವಕೀಲರಾದ ಅಶ್ವಿನಿ ಕುಮಾರ್‌ ಉಪಾಧ್ಯಾಯ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಎರಡೂ ಗೀತೆಗಳನ್ನು ಪ್ರತಿದಿನ ಶಾಲೆಗಳಲ್ಲಿ ಹಾಡುವಂತೆ ನಿರ್ದೇಶನ ನೀಡಬೇಕು ಎಂದೂ ಅವರು ಆಗ್ರಹಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.