ಶ್ರೀನಗರ: ಪಂಥಿಯಲ್ ಬಳಿ ಜಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಮತ್ತು ಬೃಹತ್ ಗಾತ್ರದ ಕಲ್ಲುಗಳು ಉರುಳಿದ್ದ ಪರಿಣಾಮ 24 ಗಂಟೆಗಳಿಗಿಂತ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗುರುವಾರ ಬೆಳಿಗ್ಗೆ ಹೆದ್ದಾರಿಯನ್ನು ತೆರವುಗೊಳಿಸಲಾಗಿದ್ದು ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
’ಹೆದ್ದಾರಿಯ ಎರಡೂ ಕಡೆ ವಾಹನ ದಟ್ಟಣೆಯನ್ನು ನಿವಾರಿಸಲಾಗಿದೆ’ ಎಂದು ಸಂಚಾರ ನಿಯಂತ್ರಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧವಿದ್ದ ಕಾರಣ ರಾಮ್ಬನ್ ಮತ್ತು ಬನಿಹಾಲ್ ನಡುವಿನ ಭಾರತ್ ಜೋಡೊ ಯಾತ್ರೆಯನ್ನೂ ಸ್ಥಗಿತಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.