ADVERTISEMENT

ಜಮ್ಮು– ಶ್ರೀನಗರ ಹೆದ್ದಾರಿಯಲ್ಲಿ ಸಂಚಾರ ಪುನರಾರಂಭ

ಪಿಟಿಐ
Published 26 ಜನವರಿ 2023, 12:35 IST
Last Updated 26 ಜನವರಿ 2023, 12:35 IST

ಶ್ರೀನಗರ: ಪಂಥಿಯಲ್‌ ಬಳಿ ಜಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಮತ್ತು ಬೃಹತ್‌ ಗಾತ್ರದ ಕಲ್ಲುಗಳು ಉರುಳಿದ್ದ ಪರಿಣಾಮ 24 ಗಂಟೆಗಳಿಗಿಂತ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತ್ತು. ಗುರುವಾರ ಬೆಳಿಗ್ಗೆ ಹೆದ್ದಾರಿಯನ್ನು ತೆರವುಗೊಳಿಸಲಾಗಿದ್ದು ಸಂಚಾರಕ್ಕೆ ಮುಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

’ಹೆದ್ದಾರಿಯ ಎರಡೂ ಕಡೆ ವಾಹನ ದಟ್ಟಣೆಯನ್ನು ನಿವಾರಿಸಲಾಗಿದೆ’ ಎಂದು ಸಂಚಾರ ನಿಯಂತ್ರಣ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‌ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧವಿದ್ದ ಕಾರಣ ರಾಮ್‌ಬನ್‌ ಮತ್ತು ಬನಿಹಾಲ್‌ ನಡುವಿನ ಭಾರತ್‌ ಜೋಡೊ ಯಾತ್ರೆಯನ್ನೂ ಸ್ಥಗಿತಗೊಳಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.