ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಾದ ಬಾಲ ಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಗುರುವಾರ ಗೌರವ ಸಮರ್ಪಿಸಿದ್ದಾರೆ.
‘ಭಾರತ ಮಾತೆಯ ಧೈರ್ಯಶಾಲಿ ಮಕ್ಕಳಾದ ಲೋಕಮಾನ್ಯ ಬಾಲ ಗಂಗಾಧರ ತಿಲಕ್, ಚಂದ್ರಶೇಖರ್ ಆಜಾದ್ ಅವರಿಗೆ ನನ್ನ ನುಡಿ ನಮನಗಳು’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
‘ಈ ಶುಭ ಸಂದರ್ಭದಲ್ಲಿ ಧೈರ್ಯಶಾಲಿಗಳಿಗೆ ನಮ್ಮ ಗೌರವ ಅರ್ಪಿಸೋಣ. ದೇಶಕ್ಕಾಗಿ ಅವರು ಕಂಡ ಕನಸುಗಳನ್ನು ನನಸಾಗಿಸಲು ಶ್ರಮಿಸೋಣ’ ಎಂದು ವೆಂಕಯ್ಯನಾಯ್ಡು ಅವರು ಟ್ವೀಟ್ ಮಾಡಿದ್ದಾರೆ.
‘ನಮ್ಮ ಸ್ವಾತಂತ್ರ್ಯ ಹೋರಾಟಗಾರರು, ರಾಷ್ಟ್ರೀಯ ನಾಯಕರ ಸಾಧನೆ, ತ್ಯಾಗ, ದೇಶಭಕ್ತಿ ಮತ್ತು ಮೌಲ್ಯಗಳ ಬಗ್ಗೆ ಶಾಲಾ ಮಕ್ಕಳಲ್ಲಿ ಭೋಧಿಸಬೇಕು’ ಎಂದು ಉಪ ರಾಷ್ಟ್ರಪತಿ ಹೇಳಿದ್ದಾರೆ.
ಬಾಲಗಂಗಾಧರ ತಿಲಕ್ ಅವರು 1856ರಲ್ಲಿ ಹಾಗೂ ಚಂದ್ರಶೇಖರ್ ಆಜಾದ್ ಅವರು 1906ರಲ್ಲಿ ಜನಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.